ಸಿಡಿ ಬಿಡುಗಡೆ ಬೆನ್ನಲ್ಲೇ ತನ್ನ ಸಚಿವರಿಗೆ ಎಚ್ಚರಿಕೆ ನೀಡಿದ ಸಿಎಂ । ಜಾಗರೂಕರಾಗಿರಿ ಎಂದ ಯಡಿಯೂರಪ್ಪ

Prasthutha|

- Advertisement -

ಕರ್ನಾಟಕ ಜನಸಂಪನ್ಮೂಲ ಸಚಿವ ಹಾಗೂ ಬಿಜೆಪಿ ಮುಖಂಡ ಆಗಿರುವ ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿ ಬಿಡುಗಡೆಗೊಂಡು ಅವರ ರಾಜೀನಾಮೆಯನ್ನು ಅಂಗೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ತನ್ನ ಸಚಿವ ಸಂಪುಟಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬೆಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಸ್ವತಃ ರಾಸಲೀಲೆಯ ಸಿಡಿ ವಿಚಾರ ಪ್ರಸ್ತಾಪಿಸಿದ ಅವರು “ ರಾಜಕೀಯ ಜೀವನದಲ್ಲಿ ಇರುವಾಗ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು” ಎಂದು ಸಚಿವರಿಗೆ ಕಿವಿಮಾತು ಹೇಳಿದ್ದಾರೆ.

ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಡಿಯೂರಪ್ಪನವರ ಸಿಡಿಯನ್ನೇ ಬಿಡುಗಡೆ ಮಾಡುವೆನೆಂಬ ಬೆದರಿಕೆ ಕೂಡಾ ಈಗಾ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ. ಇದು ಮುಂದಕ್ಕೆ ಯಾವ ತಿರುವುದು ಪಡೆಯುತ್ತದೋ ಎಂದು ಕಾದು ನೋಡಬೇಕಾಗಿದೆ.

Join Whatsapp