ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಬೆಚ್ಚಿ ಬೀಳುತ್ತಿದೆ; ಕಾಂಗ್ರೆಸ್ ವ್ಯಂಗ್ಯ

Prasthutha|

- Advertisement -

ಕುಂಬಳಕಾಯಿ ಕಳ್ಳ ಅಂದರೆ ರಾಜ್ಯ ಬಿಜೆಪಿ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ? 6 ಸಚಿವರು ಏಕೆ ಸುದ್ದಿ ಪ್ರಸಾರಕ್ಕೆ ಮುಂಜಾಗ್ರತೆಯಲ್ಲಿ ತಡೆ ತರುತ್ತಿದ್ದಾರೆ? ಸರ್ಕಾರದ ರಚನೆಯಿಂದ ಹಿಡಿದು ಸಂಪುಟ ವಿಸ್ತರಣೆಯವರೆಗೂ ಬೃಹತ್ ಹಗರಣ ಅಡಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದ್ದು, “ಆಪರೇಷನ್ ಕಮಲ” ಎನ್ನುವುದು ಬಿಜೆಪಿಯ ರಾಜಕೀಯ ವ್ಯಭಿಚಾರ. ಈ ಸರ್ಕಾರ ಮೇಲ್ನೋಟಕ್ಕೆ ಕಾಣುವಷ್ಟು ಸುಲಭದಲ್ಲಿ ರಚನೆಯಾಗಿದ್ದಲ್ಲ. ಭೂಗತಲೋಕ, ಬೆದರಿಕೆ, ಹನಿಟ್ರಾಪ್, ಬ್ಲಾಕ್ ಮೇಲ್, ಸಾವಿರಾರು ಕೋಟಿ ಹಣ, ಹೆಣ್ಣು, ಹೆಂಡ ಎಲ್ಲವನ್ನೂ ಬಿಜೆಪಿ ಉಪಯೋಗಿಸಿದ್ದು ದೃಢವಾಗುತ್ತಿದೆ. ಅಧಿಕಾರಕ್ಕಾಗಿ ರಾಜ್ಯ ಬಿಜೆಪಿ  ಯಾವ ನೀಚ ಮಟ್ಟಕ್ಕೂ ಇಳಿಯಬಲ್ಲದು ಎಂದು ಟೀಕಿಸಲಾಗಿದೆ.

- Advertisement -

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹೇಳಿದಂತೆ ಕಣ್ಣಿನಲ್ಲಿ ನೋಡಲಾಗದಂತಹ ಸಿಡಿ ಇದೆಯಂತೆ. ಬಿ.ಎಸ್.ಯಡಿಯೂರಪ್ಪ ಅವರೇ ನೀವು ತಡೆಯಾಜ್ಞೆ ತರುವುದಿಲ್ಲವೇ?! ಎಂದು ವ್ಯಂಗ್ಯವಾಡಲಾಗಿದೆ. ಟ್ವಿಟ್ಟರ್ ನಲ್ಲಿ #BJPblueBoys ಎಂಬ ಹ್ಯಾಷ್ ಟ್ಯಾಗ್ ಮೂಲಕ ಟ್ವೀಟ್ ಮಾಡಲಾಗಿದೆ.

ಯಡಿಯೂರಪ್ಪ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿಯ ಕೆಲ ಮಂತ್ರಿಗಳು ಸದನದಲ್ಲೇ ಅಶ್ಲೀಲ ವೀಡಿಯೋ ನೋಡಿ ಸಿಕ್ಕಿ ಬಿದ್ದಿದ್ದರು. ಆಮೇಲೆ ಮೋದಿಯವರು  ‘ಆತ್ಮ ನಿರ್ಭರ’ ಭಾರತವನ್ನು ಘೋಷಿಸಿದ ನಂತರ ಬಿಜೆಪಿ ಮಂತ್ರಿಗಳು ಈಗ ಅವರದ್ದೇ ಅಶ್ಲೀಲ ಸಿಡಿಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಇದು ‘ಮೇಕ್ ಇನ್ ಇಂಡಿಯಾ’ ದ ಅತಿ ದೊಡ್ಡ ಗೆಲುವಾಗಿದೆ.

Join Whatsapp