ಸಿದ್ದರಾಮಯ್ಯನಿಗೆ ನಾಗರಿಕತೆ ಇಲ್ಲ, ಸಂಸ್ಕೃತಿ ಇಲ್ಲ: ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ಮತ್ತೆ ವಾಗ್ದಾಳಿ

Prasthutha|

ಮೈಸೂರು: ಸಿದ್ದರಾಮಯ್ಯ ದಪ್ಪ ಚರ್ಮದ ಮನುಷ್ಯ ಆಗಿದ್ದು, ಅವರಿಗೆ ನಾಗರಿಕತೆ, ಸಂಸ್ಕೃತಿ ಇಲ್ಲ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

- Advertisement -

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಮಾತಾನಾಡಿಸುತ್ತಾರೆ. ಕೇಳಿದರೆ ಹಳ್ಳಿಯಿಂದ ಬಂದಿದ್ದೇನೆ ಎಂದು ಹೇಳುತ್ತಾರೆ. ನಿಮ್ಮಂತೆ ಸಾಕಷ್ಟು ಜನರು ಹಳ್ಳಿಯಿಂದ ಬಂದಿದ್ದಾರೆ. ಆದರೆ ಯಾರೂ ಕೂಡ ನಿಮ್ಮಂತೆ ಮಾತನಾಡುವುದಿಲ್ಲ” ಎಂದು ಕಿಡಿಕಾರಿದರು.

ಇನ್ನು, ನನ್ನ ಪಕ್ಷದವರೇ ನನ್ನ ಬೆನ್ನಿಗೆ ಚೂರಿ ಹಾಕಿದರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಿಮಗ್ಯಾರು ಬೆನ್ನಿಗೆ ಚೂರಿ ಹಾಕ್ತಾರೆ. ನೀವು ಸರಿಯಾಗಿ ಇದ್ದಿದ್ರೆ ಹೈಕಮಾಂಡ್ ಗೆ ನಿಮ್ಮ ವಿರುದ್ಧ ಯಾಕೆ ದೂರು ಕೊಡ್ತಿದ್ರು ಎಂದು ಪ್ರಶ್ನಿಸಿದ್ದಾರೆ.

- Advertisement -

ನೀವು ಕಾಂಗ್ರೆಸ್ ಪಕ್ಷದಲ್ಲಿದ್ದರೆ ಪಕ್ಷ ನಾಶವಾಗಲಿದೆ ಎಂದು ನಿಮ್ಮ ಪಕ್ಷದವರೇ ನಿಮ್ಮ ವಿರುದ್ಧ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಇದರಲ್ಲೇ ತಿಳಿಯುತ್ತೆ ನಿಮ್ಮ ನಾಯಕತ್ವದ ಮಟ್ಟ ಎಂದು ಶ್ರೀನಿವಾಸ್ ಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದರು.

Join Whatsapp