ಹಗಲಿನಲ್ಲಿ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ; ರಾತ್ರಿ ಮದ್ಯಪಾನ : ಕಾಂಗ್ರೆಸ್ ನಾಯಕ

Prasthutha|

- Advertisement -

ಭೋಪಾಲ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬಿಜೆಪಿಯ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಕಾಂತಿಲಾಲ್ ಭೂರಿಯಾ ವಾಗ್ದಾಳಿ ನಡೆಸಿದ್ದಾರೆ.

ರಾಮ ಮಂದಿರಕ್ಕಾಗಿ ಹಗಲಿನಲ್ಲಿ ಸಂಗ್ರಹಿಸಿದ ಹಣದಿಂದ ಬಿಜೆಪಿ ಕಾರ್ಯಕರ್ತರು ರಾತ್ರಿಯಲ್ಲಿ ಮದ್ಯಪಾನ ಮಾಡುತ್ತಿದ್ದಾರೆ ಎಂದು ಭೂರಿಯಾ ಹೇಳಿದ್ದಾರೆ.

- Advertisement -

ರಾಮ ಮಂದಿರದ ಹೆಸರಿನಲ್ಲಿ ಈಗಾಗಲೇ ಕೋಟ್ಯಾಂತರ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ. ಈ ಮೊತ್ತವು ಬಿಜೆಪಿ ನಾಯಕರ ನಿಯಂತ್ರಣದಲ್ಲಿದೆ ಎಂದು ಮಧ್ಯಪ್ರದೇಶದ ಜಬುವ ಕ್ಷೇತ್ರದ ಕಾಂಗ್ರೆಸ್ ಶಾಸಕ ಭೂರಿಯಾ ಹೇಳಿದ್ದಾರೆ. ಸಂಗ್ರಹಿಸಿದ ಹಣವನ್ನು ರಾಮ ಮಂದಿರ ಟ್ರಸ್ಟ್‌ನಲ್ಲಿ ಜಮಾ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಹಗಲು ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಹಣ ಸಂಗ್ರಹಿಸಿ ರಾತ್ರಿಯಲ್ಲಿ ನದಿಯ ತೀರದಲ್ಲಿ ಮದ್ಯಪಾನ ಮಾಡುತ್ತಾರೆ ಎಂದು ಅವರು ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕನ ಹೇಳಿಕೆಯನ್ನು ನಾಚಿಕೆಗೇಡು ಎಂದು ಬಿಜೆಪಿ ಬಣ್ಣಿಸಿದೆ. ಕಾಂಗ್ರೆಸ್ ಯಾವಾಗಲೂ ರಾಮನನ್ನು ನಿಂದಿಸಲು ಪ್ರಯತ್ನಿಸುತ್ತಿದೆ ಎಂದು ಮಧ್ಯಪ್ರದೇಶ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ.

Join Whatsapp