ಹಿರಿಯ ಪತ್ರಕರ್ತ ರವಿ ಬೆಳೆಗರೆ ನಿಧನ

Prasthutha|

ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಪತ್ರಿಕೆಯ ಸ್ಥಾಪಕ ರವಿ ಬೆಳೆಗೆರೆ ನ.12ರ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

1995ರಲ್ಲಿ ಅವರು ಹಾಯ್ ಬೆಂಗಳೂರು ವಾರ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಣಗಳು ಅಪಾರ ಜನಪ್ರಿಯತೆಯನ್ನು ಪಡೆದಿವೆ. ಹಿಮಾಗ್ನಿ, ದಂಗೆಯ ದಿನಗಳು, ನೀನಾ ಪಾಕಿಸ್ತಾನ? ಡಿ ಕಂಪನಿ, ಮೊದಲಾದ ಜನಪ್ರಿಯ ಕೃತಿಗಳನ್ನು ಅವರು ರಚಿಸಿದ್ದರು.

1958 ರ ಮಾರ್ಚ್ 15ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

- Advertisement -

ಪತ್ರಿಕೋದ್ಯಮದ ಸಾಧನೆಗಾಗಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.

Join Whatsapp