Home ಟಾಪ್ ಸುದ್ದಿಗಳು ಹಿರಿಯ ಪತ್ರಕರ್ತ ರವಿ ಬೆಳೆಗರೆ ನಿಧನ

ಹಿರಿಯ ಪತ್ರಕರ್ತ ರವಿ ಬೆಳೆಗರೆ ನಿಧನ

ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಪತ್ರಿಕೆಯ ಸ್ಥಾಪಕ ರವಿ ಬೆಳೆಗೆರೆ ನ.12ರ ಮಧ್ಯರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

1995ರಲ್ಲಿ ಅವರು ಹಾಯ್ ಬೆಂಗಳೂರು ವಾರ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಣಗಳು ಅಪಾರ ಜನಪ್ರಿಯತೆಯನ್ನು ಪಡೆದಿವೆ. ಹಿಮಾಗ್ನಿ, ದಂಗೆಯ ದಿನಗಳು, ನೀನಾ ಪಾಕಿಸ್ತಾನ? ಡಿ ಕಂಪನಿ, ಮೊದಲಾದ ಜನಪ್ರಿಯ ಕೃತಿಗಳನ್ನು ಅವರು ರಚಿಸಿದ್ದರು.

1958 ರ ಮಾರ್ಚ್ 15ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಪತ್ರಿಕೋದ್ಯಮದ ಸಾಧನೆಗಾಗಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.

Join Whatsapp
Exit mobile version