ಹಿರಿಯ ಪತ್ರಕರ್ತ ಲಿಂಗೇನಹಳ್ಳಿ ಸುರೇಶ್ಚಂದ್ರ ನಿಧನ

Prasthutha|

ಬೆಂಗಳೂರು; ಹಿರಿಯ ಪತ್ರಕರ್ತ, ಸಂಜೆವಾಣಿ ಪತ್ರಿಕೆಯ ಮಾಜಿ ಸಂಪಾದಕ ಲಿಂಗೇನಹಳ್ಳಿ ಸುರೇಶ್ಚಂದ್ರ ಶುಕ್ರವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕೋವಿಡ್ – 19 ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ.

- Advertisement -

’ಸಂಜೆವಾಣಿ’ ಪತ್ರಿಕೆಯಲ್ಲಿ ಸುದೀರ್ಘ 30 ವರ್ಷಗಳ ಕಾಲ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಅವರು ಕೆಲವು ವರ್ಷಗಳ ಕಾಲ ಈ ಸಂಜೆ ಪತ್ರಿಕೆಯಲ್ಲೂ ಕೆಲಸ ಮಾಡಿದ್ದರು. ಕಳೆದ ವರ್ಷ ಸಂಜೆವಾಣಿ ಪತ್ರಿಕೆಯಿಂದ ನಿವೃತ್ತರಾಗಿದ್ದರು. ಕನ್ನಡ ಚಲನಚಿತ್ರಗಳಲ್ಲೂ ಅಭಿನಯಿಸಿದ್ದ ಸುರೇಶ್ಚಂದ್ರ ಅವರು, ನಾಟಕ, ಸಾಹಿತ್ಯ, ಸಂಗೀತ ಅದರಲ್ಲೂ ಭಾವಗೀತೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ನರಹಂತಕ ವೀರಪ್ಪನ್ ಕುರಿತಂತೆ ಅವರು ಬರೆಯುತ್ತಿದ್ದ ಲೇಖನ ಹೆಚ್ಚು ಜನಪ್ರಿಯವಾಗಿತ್ತು.

ಮೃತರು, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಸುರೇಶ್ಚಂದ್ರರವರ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಮಧುಗಿರಿ ತಾಲ್ಲೂಕಿನ ಲಿಂಗೇನಹಳ್ಳಿಯಲ್ಲಿ ಇಂದು ಸಂಜೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Join Whatsapp