ಮುಂಬೈಯಿಂದ ರಾಜ್ಯಕ್ಕೆ ಹರಿದು ಬರುತ್ತಿದೆ ಕುರುಡು ಕಾಂಚಾಣ| ಮತ್ತೆ 1.5 ಕೋಟಿ ರೂ. ವಶಕ್ಕೆ ಪಡೆದ ಪೊಲೀಸರು

Prasthutha|

ಬೆಳಗಾವಿ: ವಿಧಾನಸಭೆ ಚುನಾವಣೆಯ ಸಮಯದಲ್ಲಿ ಮುಂಬೈಯಿಂದ ರಾಜ್ಯಕ್ಕೆ ದಾಖಲೆಗಳಿಲ್ಲದ ಕೋಟಿ ಕೋಟಿ ಹಣಗಳು ಹರಿದು ಬರುತ್ತಿದ್ದು, ಬುಧವಾರ ಮಧ್ಯರಾತ್ರಿ ಗಡಿ ಜಿಲ್ಲೆ ಬೆಳಗಾವಿಯ ನಿಪ್ಪಾಣಿ ಬಳಿಯ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ 1.5 ಕೋಟಿ ಹಣವನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ವ್ಯಕ್ತಿಯೊಬ್ಬರು ಮುಂಬೈದಿಂದ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದಾಗ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಬಸ್ ತಪಾಸಣೆ ಮಾಡಿದಾಗ ಯಾವುದೇ ದಾಖಲೆಗಳಿಲ್ಲದೆ ತೆಗೆದುಕೊಂಡು ಹೋಗುತ್ತಿದ್ದ 1.5 ಕೋಟಿ ಹಣ ಪತ್ತೆಯಾಗಿದೆ.

ಏ.5ರಂದು ಬುಧವಾರ ನಸುಕಿನ ಜಾವ ಮುಂಬೈನಿಂದ ಮಂಗಳೂರು ಕಡೆಗೆ ಹೊರಟಿದ್ದ ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2 ಕೋಟಿ ರೂ.‌ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಪೊಲೀಸರು ಪತ್ತೆ ಹಚ್ಚಿದ್ದರು.

- Advertisement -

ಹಣವನ್ನು ವಶಪಡಿಸಿಕೊಂಡಿರುವ ಪೊಲೀಸರು ಆದಾಯ ತೆರಿಗೆ ಇಲಾಖೆಯ ಸುಪರ್ದಿಗೆ ಹಣ ಒಪ್ಪಿಸಿ ಮುಂದಿನ ತನಿಖೆ ನಡೆಸಿದ್ದಾರೆ.

Join Whatsapp