ಕಮರಿಗೆ ಉರುಳಿದ ಕಾರು: 10 ಮಂದಿ ಮೃತ್ಯು

Prasthutha|

ಬನಿಹಲ್ (ಜಮ್ಮು): ಕಾರೊಂದು ಕಮರಿಗೆ ಉರುಳಿ 10 ಮಂದಿ ಮೃತಪಟ್ಟ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

- Advertisement -


ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬ್ಯಾಟರಿ ಚಶ್ಮಾ ಪ್ರದೇಶದಲ್ಲಿ ಗುರುವಾರ ಮಧ್ಯರಾತ್ರಿ 1.15ರ ಸುಮಾರಿಗೆ ಘಟನೆ ಸಂಭವಿಸಿದೆ.


ಸ್ಕಿಡ್ ಆದ ಷೆವರ್ಲೆ ಟವೆರಾ ಕಾರು, 300 ಅಡಿ ಆಳದ ಕಮರಿಗೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -


ಪೊಲೀಸ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಭಾರಿ ಮಳೆಯ ನಡುವೆ 10 ಪ್ರಯಾಣಿಕರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp