ಹೆದ್ದಾರಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಬಸ್, 8 ಮಂದಿ ಮೃತ್ಯು

Prasthutha|

ಬಾರ್ಮೇರ್:  ರಾಜಸ್ಥಾನದ ಬಾರ್ಮೇರ್-ಜೋಧ್’ಪುರ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭಿವಿಸಿದ ಭೀಕರ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. 25ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದ ಟ್ಯಾಂಕರ್ ಟ್ರಕ್’ಗೆ ಡಿಕ್ಕಿಹೊಡೆದಿದ್ದು, ಅಪಘಾತದ ರಭಸಕ್ಕೆ ಖಾಸಗಿ ಬಸ್ ಹೆದ್ದಾರಿಯಲ್ಲೇ ಹೊತ್ತಿ ಉರಿದಿದೆ.

- Advertisement -

ರಾಜಸ್ಥಾನದ ಬರ್ಮೇರ್ ಜಿಲ್ಲೆಯ ಬಲೋತ್ರದಿಂದ ಹೊರಟಿದ್ದ ಬಸ್ ಪಚ್ ಪದ್ರ ಗ್ರಾಮ ತಲುಪುತ್ತಿದ್ದ ವೇಳೆ ರಾಂಗ್ ಸೈಡ್’ನಲ್ಲಿ ಬಂದ ಟ್ಯಾಂಕರ್ ಟ್ರಕ್’ಗೆ ಡಿಕ್ಕಿಹೊಡೆದಿದೆ. ಘಟನೆಯಲ್ಲಿ ಈವರೆಗೂ 8 ಮಂದಿ ಮೃತಪಟ್ಟಿರುವುದಾಗಿ SP  ದೀಪಕರ್ ಭಾರ್ಗವ ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರು ಹಾಗೂ ಗಾಯಾಳುಗಳಿಗೆ ತಲಾ 50000 ರುಪಾಯಿ ಪರಿಹಾರ ಘೋಷಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಗಳಿಗೆ ನೇತೃತ್ವ ನೀಡುವಂತೆ ಬರಮೇರ್ ಜಿಲ್ಲಾಧಿಕಾರಿಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖುದ್ದು, ಸೂಚನೆ ನೀಡಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಿದ್ದಾರೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲವು ಘಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

Join Whatsapp