ಬಸ್​ ಕಮರಿಗೆ ಬಿದ್ದು, 11 ಮಂದಿ ಸಾವು

Prasthutha|

ಶ್ರೀನಗರ: ಮಿನಿ ಬಸ್​ ಕಮರಿಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಪ್ರಯಾಣಿಕರು ಸಾವನ್ನಪ್ಪಿ 26 ಮಂದಿ‌ ಗಾಯಗೊಂಡಿರುವ ಘಟನೆ ಕಣಿವೆ ನಾಡು ಜಮ್ಮು-ಕಾಶ್ಮೀರದ ಪೂಂಚ್ ​​ನ ಸಾವ್ಜಿಯಾನ್​ ಬಳಿ ನಡೆದಿದೆ.

- Advertisement -

ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ಬಸ್​ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಈ ಅವಘಡ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ಸೇನೆ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಗಾಯಗೊಂಡವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದು ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

- Advertisement -

ಬದುಕುಳಿದವರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Join Whatsapp