Home ಟಾಪ್ ಸುದ್ದಿಗಳು ಬಸ್​ ಕಮರಿಗೆ ಬಿದ್ದು, 11 ಮಂದಿ ಸಾವು

ಬಸ್​ ಕಮರಿಗೆ ಬಿದ್ದು, 11 ಮಂದಿ ಸಾವು

ಶ್ರೀನಗರ: ಮಿನಿ ಬಸ್​ ಕಮರಿಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಪ್ರಯಾಣಿಕರು ಸಾವನ್ನಪ್ಪಿ 26 ಮಂದಿ‌ ಗಾಯಗೊಂಡಿರುವ ಘಟನೆ ಕಣಿವೆ ನಾಡು ಜಮ್ಮು-ಕಾಶ್ಮೀರದ ಪೂಂಚ್ ​​ನ ಸಾವ್ಜಿಯಾನ್​ ಬಳಿ ನಡೆದಿದೆ.

ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ಬಸ್​ ಕಂದಕಕ್ಕೆ ಉರುಳಿ ಬಿದ್ದಿರುವ ಪರಿಣಾಮ ಈ ಅವಘಡ ಸಂಭವಿಸಿದ್ದು, ಘಟನಾ ಸ್ಥಳದಲ್ಲಿ ಸೇನೆ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಗಾಯಗೊಂಡವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗುತ್ತಿದ್ದು ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಬದುಕುಳಿದವರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Join Whatsapp
Exit mobile version