ವಿರೋಧ ಪಕ್ಷದ 12 ಮಂದಿ ಸಂಸದರು ರಾಜ್ಯಸಭೆಯಿಂದ ಅಮಾನತು

Prasthutha|

ನವದೆಹಲಿ: ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ 12 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ.

- Advertisement -


ಆರು ಮಂದಿ ಕಾಂಗ್ರೆಸ್, ಟಿಎಂಸಿಯ ಇಬ್ಬರು, ಶಿವಸೇನೆ, ಸಿಪಿಎಂ ಮತ್ತು ಸಿಪಿಐನಿಂದ ತಲಾ ಒಬ್ಬರು ಅಮಾನತುಗೊಂಡಿದ್ದಾರೆ.ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್ ಅವರು ಸದಸ್ಯರ ಅಮಾನತು ಘೋಷಿಸಿ ಸದನವನ್ನು ಮಂಗಳವಾರಕ್ಕೆ ಮುಂದೂಡಿದರು.


ಆಗಸ್ಟ್ ತಿಂಗಳಲ್ಲಿ ನಡೆದ ಸಂಸತ್ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ನಿಯಮ ದುರುಪಯೋಗ ಹಾಗೂ ಅಶಿಸ್ತಿನಿಂದ ನಡೆದುಕೊಂಡಿರುವ ಕಾರಣ ಸದಸ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಂಗ್ ತಿಳಿಸಿದರು.

Join Whatsapp