ರಕ್ತಸ್ರಾವದ ನಡುವೆ ಸಹಾಯ ಕೇಳಿದರೂ ಅತ್ಯಾಚಾರ ಸಂತ್ರಸ್ತೆಯನ್ನು ದೂರ ಓಡಿಸಿದ ಜನರು!

Prasthutha|

ಉಜ್ಜಯಿನಿ: ರಕ್ತಸ್ರಾವದ ನಡುವೆ ಸಹಾಯ ಕೇಳಿದರೂ ಅತ್ಯಾಚಾರ ಸಂತ್ರಸ್ತೆಯನ್ನು ಜನರು ದೂರ ಓಡಿಸಿದ ವಿದ್ರಾವಕ ಘಟನೆ ವರದಿಯಾಗಿದೆ.

- Advertisement -

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯೊಬ್ಬಳು ಅರೆಬೆತ್ತಲೆಯಾಗಿ ಬೀದಿಯಲ್ಲಿ ಸಹಾಯಕ್ಕಾಗಿ ಓಡಾಡಿದ್ದು, ಆಕೆಗೆ ರಕ್ತಸ್ರಾವವಾಗುತ್ತಿತ್ತು. ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ಎಸಗಿ ನಗರದ ದಂಡಿ ಆಶ್ರಮದ ಬಳಿ ಎಸೆದಿದ್ದರು ಎನ್ನಲಾಗಿದೆ.

 ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳಲ್ಲಿ, ಹುಡುಗಿ ವಸತಿ ಪ್ರದೇಶದಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಒಂದು ಚಿಂದಿ ಬಟ್ಟೆಯನ್ನು ಮೈಗೆ ಹೊದ್ದು ಆಕೆ ನಡೆಯುತ್ತಾ ಬರುತ್ತಿರುವುದು ವಿಡಿಯೊದಲ್ಲಿದೆ. ಹಾಗೆ ನಡೆದು ಬರುತ್ತಿರುವಾಗ ಮನೆಯೊಂದರ ಹೊರಗೆ ನಿಂತಿರುವ ಒಬ್ಬ ವ್ಯಕ್ತಿಯಲ್ಲಿ ಆಕೆ ಸಹಾಯ ಬೇಡುತ್ತಾಳೆ. ಆತ ಆಕೆಯಲ್ಲಿ ಹೋಗು ಹೋಗು ಎಂದು ಕೈಸನ್ನೆ ಮಾಡುತ್ತಿರುವುದು ವಿಡಿಯೊದಲ್ಲಿದೆ.

- Advertisement -

ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗಾಗಿ ಇಂದೋರ್‌ಗೆ ಕಳುಹಿಸಲಾಗಿದೆ.

“ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಅಪರಾಧಿಗಳನ್ನು ಶೀಘ್ರದಲ್ಲೇ ಗುರುತಿಸಲು ಮತ್ತು ಹಿಡಿಯಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ವೈದ್ಯಕೀಯ ಪರೀಕ್ಷೆಯು ದೃಢಪಟ್ಟಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಸಚಿನ್ ಶರ್ಮಾ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಹುಡುಗಿ ಎಲ್ಲಿಂದ ಬಂದಿದ್ದಾಳೆಂದು ನಮಗೆ ನಿಖರವಾಗಿ ಹೇಳಲು ಸಾಧ್ಯವಾಗಲಿಲ್ಲ. ಆದರೆ ಆಕೆಯ ಉಚ್ಚಾರಣೆಯು ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನವಳೆಂದು ಸೂಚಿಸುತ್ತದೆ ಎಂದು ಅವರು ಹೇಳಿದರು.

Join Whatsapp