ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ದಲಿತ ಬಾಲಕಿಯ ಅತ್ಯಾಚಾರ | ಕೇಸ್ ಹಿಂಪಡೆಯಲು ಕಿರುಕುಳ | ಬೆಂಕಿ ಹಚ್ಚಿ ಹತ್ಯೆಗೈದ ದುಷ್ಟರು

Prasthutha|

ಬುಲಂದ್ ಶಹರ್ : ಉತ್ತರ ಪ್ರದೇಶದಲ್ಲಿ ಮತ್ತೊಂದು ದಲಿತ ಬಾಲಕಿಯ ಅತ್ಯಾಚಾರ, ಹತ್ಯೆ ನಡೆದಿದೆ. ಬುಲಂದ್ ಶಹರ್ ನ 15 ವರ್ಷದ ಬಾಲಕಿಯೊಬ್ಬಳ ಮೇಲೆ 3 ತಿಂಗಳ ಹಿಂದೆ ಅತ್ಯಾಚಾರ ನಡೆದಿತ್ತು. ಆರೋಪಿ ಬಂಧಿತನೂ ಆಗಿದ್ದ, ಬಂಧಿತನ ಸಂಬಂಧಿಕರು ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರುತ್ತಿದ್ದರು, ಅಲ್ಲದೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೀಗ ಆರೋಪಿಯ ಏಳು ಮಂದಿ ಸಂಬಂಧಿಕರು ಬಾಲಕಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

- Advertisement -

ಏಳು ಮಂದಿ ದುಷ್ಕರ್ಮಿಗಳು ಬಾಲಕಿಯ ಮನೆಯೊಳಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಯು ಆಸ್ಪತ್ರೆಯಲ್ಲಿ ಆರೋಪಿಗಳ ಬಗ್ಗೆ ಮಾತನಾಡುತ್ತಿರುವ ವೀಡಿಯೊ ಬಹಿರಂಗವಾಗಿದೆ.

ಆಗಸ್ಟ್ ನಲ್ಲಿ ಬಾಲಕಿಯ ಮೇಲೆ ವ್ಯಕ್ತಿಯೊಬ್ಬನಿಂದ ಅತ್ಯಾಚಾರ ನಡೆದಿತ್ತು. ಆತ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಬಾಲಕಿ ಅಸಹಜ ರೀತಿಯಲ್ಲಿ ಸಾವಿಗೀಡಾಗಿರುವ ಬಗ್ಗೆ ಮಾಹಿತಿ ನಮಗೆ ಬಂದಿತ್ತು. ಮೊದಲು ಬಾಲಕಿಯೇ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನಲಾಗುತಿತ್ತು. ಬಳಿಕ ಕುಟುಂಬ ನೀಡಿರುವ ದೂರಿನಲ್ಲಿ ಏಳು ಮಂದಿ ಆಕೆಯ ಮೇಲೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ ಎಂದು ಆಪಾದಿಸಲಾಗಿದೆ ಎಂದು ಬುಲಂದ್ ಶಹರ್ ಎಸ್ ಎಸ್ ಪಿ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ.

Join Whatsapp