ವಯನಾಡು ದುರಂತ: 150 ಮಂದಿ ಸಾವು, ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ

Prasthutha|

►ಪ್ರವಾಹ ಪೀಡಿತ ಸ್ಥಳಕ್ಕೆ ತೆರಳುತ್ತಿದ್ದ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕಾರು‌ ಅಪಘಾತ

- Advertisement -

ತಿರುವನಂತಪುರ: ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ ರಾತ್ರಿ ವೇಳೆಗೆ 150ಕ್ಕೆ ಏರಿಕೆಯಾಗಿದೆ. ಸಾಕಷ್ಟು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ.


ಜಿಲ್ಲಾ ಕೇಂದ್ರದಿಂದ 25 ಕಿ.ಮೀ. ದೂರದಲ್ಲಿರುವ ಮೆಪ್ಪಾಡಿ ಪಟ್ಟಣದ ಸಮೀಪದ ಚೂರಲ್ಮಲ ಮತ್ತು ಮುಂಡಕ್ಕಿ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದ 130 ಜನರು ಗಾಯಗೊಂಡಿದ್ದಾರೆ. ಸಾಕಷ್ಟು ಜನರು ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಮಲಪ್ಪುರಂ ಜಿಲ್ಲೆಯ ಪೋಥುಕಲ್ನಲ್ಲಿ ಕೆಲವರ ಶವಗಳು ಪತ್ತೆಯಾಗಿವೆ. ಗುರುತು ಪತ್ತೆ ಕಾರ್ಯ ಇನ್ನಷ್ಟೇ ಆಗಬೇಕಿದೆ.

- Advertisement -


ಭೂಕುಸಿತ ಪೀಡಿತ ವಯನಾಡ್‌ ಗೆ ತೆರಳುತ್ತಿದ್ದ ಸಚಿವೆ ವೀಣಾ ಜಾರ್ಜ್ ಮಂಜೇರಿಯ ಚೆಟ್ಟಿಯಂಗಡಿ ಎಂಬಲ್ಲಿ ಬೆಳಗ್ಗೆ 7:30ರ ಸುಮಾರಿಗೆ ಅವರ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಎದುರಿಗೆ ಬರುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವಾಹನವನ್ನು ತಿರುಗಿಸಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಕೂಟರ್‌ನಲ್ಲಿದ್ದವರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



Join Whatsapp