ಉತ್ತರ ಪ್ರದೇಶ | ಮುಸ್ಲಿಮ್ ಯುವಕನ ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

Prasthutha|

ಲಕ್ನೋ: 19 ವರ್ಷದ ಮುಸ್ಲಿಮ್ ಯುವಕನೊಬ್ಬನನ್ನು ಅಪರಿಚಿತರ ತಂಡವೊಂದು ಗುಂಡಿಕ್ಕಿ ಹತ್ಯೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಸಹರಾನ್’ಪುರ ಜಿಲ್ಲೆಯ ಪರೌಲಿ ಎಂಬಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಶಾರುಕ್ ಎಂದು ಗುರುತಿಸಲಾಗಿದೆ.

- Advertisement -

ಮುಝಾಫರ್ ನಗರದಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಶಾರುಖ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೃತ ಯುವಕನ ತಂದೆ ನೀಡಿದ ದೂರಿನ ಅನ್ವಯ ಆ ಧರಂವೀರ್ ಮತ್ತು ಓಂಪಾಲ್ ಎಂಬವರನ್ನು ಬಂಧಿಸಲಾಗಿದೆ.

- Advertisement -

ಶಾರುಖ್ ಮೇಲೆ ಕಳ್ಳತನದ ಆರೋಪ ಹೊರಿಸಲಾಗಿತ್ತು ಮತ್ತು ಆತ ಮತ್ತು ಆತನ ಸ್ನೇಹಿತನನ್ನು ದುಷ್ಕರ್ಮಿಗಳು ಬೆದರಿಸಿದ್ದರು ಎಂದು ಮೃತನ ಕುಟುಂಬದ ಸದಸ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮೃತನ ಕುಟುಂಬದ ಸದಸ್ಯರು ಆತನ ಮೇಲಿನ ಕಳ್ಳತನದ ಆರೋಪವನ್ನು ನಿರಾಕರಿಸಿದ್ದು, ಉದ್ದೇಶಪೂರ್ವಕವಾಗಿ ಹತ್ಯೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಕೂಲಿ ಕಾರ್ಮಿಕನಾದ ಶಾರುಖ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ದಾರಿಯಲ್ಲಿ ಕೆಲವರು ಆಯುಧಗಳನ್ನು ಹಿಡಿದು ನಿಂತಿದ್ದು, ಈ ಪೈಕಿ ಒಬ್ಬಾತ ಶಾರುಖ್’ನ ಮೇಲೆ ಗುಂಡು ಹಾರಿಸಿ ಹತ್ಯೆ ನಡೆಸಿದ್ದಾನೆ ಎಂದು ಸೋದರ ಸಂಬಂಧಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆ ರವಾನಿಸಿದ್ದಾರೆ.



Join Whatsapp