ಮೈಸೂರು ವಿವಿ ಗೆ ಪುನೀತ್, ಪಾರ್ವತಮ್ಮ ಸ್ಮರಣಾರ್ಥ 2 ಚಿನ್ನದ ಪದಕ; ಘಟಿಕೋತ್ಸವ ಸಮಾರಂಭದಲ್ಲಿ ಅಶ್ವಿನಿ ಘೋಷಣೆ

Prasthutha|

ಮೈಸೂರು: ಪುನೀತ್ ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸ್ಮರಣಾರ್ಥ ಪ್ರತಿ ವರ್ಷ ಮೈಸೂರು ವಿಶ್ವವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ಚಿನ್ನದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಘೋಷಣೆ ಮಾಡಿದರು.

- Advertisement -

ಮೈಸೂರು ವಿಶ್ವವಿದ್ಯಾಲಯದ 102ನೇ ಘಟಿಕೋತ್ಸವ ಸಮಾರಂಭದಲ್ಲಿ ವಿವಿ ವತಿಯಿಂದ ನಟ ಪುನೀತ್ ರಾಜ್ ಕುಮಾರ್ ಅವರಿಗೆ (ಮರಣೋತ್ತರ) ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಅಶ್ವಿನಿ,  ಪುನೀತ್ ಅವರ ಹೆಸರಲ್ಲಿ ಲಲಿತಾಕಲಾ ವಿಭಾಗಕ್ಕೆ ಒಂದು ಚಿನ್ನದ ಪದಕ, ಪಾರ್ವತಮ್ಮ ರಾಜ್ ಕುಮಾರ್ ಅವರ ಹೆಸರಿನಲ್ಲಿ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್‌ ವಿಭಾಗಕ್ಕೆ ಒಂದು ಚಿನ್ನದ ಪದಕ  ಎಂಬಂತೆ ಆಯಾ ವಿಭಾಗದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪದಕ ನೀಡುವುದಾಗಿ ಘೋಷಿಸಿದರು.

ಮುಖ್ಯ ಅತಿಥಿಗಳಾಗಿ ಡಾ. ರಾಜ್ ಕುಮಾರ್ ಕುಟುಂಬಸ್ಥರು ಆಗಮಿಸಿದ್ದರು.

Join Whatsapp