Home ಟಾಪ್ ಸುದ್ದಿಗಳು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಗದೇ 20ಕ್ಕೂ ಅಧಿಕ ಮಂದಿ ಸಾವು!

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಗದೇ 20ಕ್ಕೂ ಅಧಿಕ ಮಂದಿ ಸಾವು!

ಚಾಮರಾಜನಗರ : ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಮಾಡುವಲ್ಲಿ ಸರಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್‌ ಸಿಗದೇ 20ಕ್ಕೂ ಅಧಿಕ ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಮುಂದೆ ನೂರಾರು ಮಂದಿ ಜಮಾಯಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು , ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಘಟನೆಯ ಹೊಣೆಯನ್ನು ಯಾರು ಹೊತ್ತಿಕೊಳ್ಳುತ್ತಾರೆ ಎಂದು ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

ಈ ನಡುವೆ ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,68,147 ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,99,25,604ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,417 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,18,959 ಕ್ಕೆ ಏರಿಕೆಯಾಗಿದೆ.

Join Whatsapp
Exit mobile version