ದೇಶಾದ್ಯಂತ 22000 ಕಿ.ಮೀ. ಯಾತ್ರೆ ಮುಗಿಸಿ ಮಂಗಳೂರಿಗೆ ಆಗಮಿಸಿದ ಏಕಾಂಗಿ ಬೈಕ್ ರೈಡರ್

Prasthutha|

ಮಂಗಳೂರು: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ  ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಬುಧವಾರ ಡೊಂಗರಕೇರಿ ಕೆನರಾ ಹೈಸ್ಕೂಲಿಗೆ ಭೇಟಿ ನೀಡಿದರು.

- Advertisement -

ಕೆನರಾ ಎಸೋಸಿಯೇಶನ್ ವತಿಯಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಅಮೃತಾ ಜೋಷಿಯವರು ತಿರಂಗಾ ಯಾತ್ರಾ ಅಭಿಯಾನದ ಅಂಗವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ ದೇಶವ್ಯಾಪಿ 22000 ಕಿ.ಮೀ ಸಂಚರಿಸಿದ್ದಾರೆ. ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕೂಡ ಕಣ್ಣಾರೆ ಕಂಡು ಬಂದಿದ್ದಾರೆ.

- Advertisement -

ರಾಜ್ಯದ ಸಾಂಸ್ಕೃತಿಕ ರಾಯಭಾರಿ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿರುವ ಅಮೃತಾ ಜೋಷಿಯವರು ಎಲ್ಲ ಕಡೆ ಜನರು ನಮಗೆ ಒಳ್ಳೆಯ ಬೆಂಬಲ ನೀಡಿದರು. ಇಲ್ಲಿಂದ ಅವರು ಬೈಕ್ ಮೂಲಕ ಕುಂಬಳೆ, ಕೋಝಿಕೋಡ್ ನತ್ತ ತೆರಳಿದರು.

Join Whatsapp