Home ಟಾಪ್ ಸುದ್ದಿಗಳು ಬಿಜೆಪಿ ಕಾಲದಲ್ಲಿ 25-30 ಹಗರಣ ನಡೆದಿವೆ: ಎಂ.ಬಿ.ಪಾಟೀಲ್

ಬಿಜೆಪಿ ಕಾಲದಲ್ಲಿ 25-30 ಹಗರಣ ನಡೆದಿವೆ: ಎಂ.ಬಿ.ಪಾಟೀಲ್

ಶಿವಮೊಗ್ಗ: ಬಿಜೆಪಿಯವರ ಕಾಲದಲ್ಲಿ 25 – 30 ಹಗರಣ ನಡೆದಿವೆ. ಅದನ್ನು ಜನರಿಗೆ ತಿಳಿಸುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.


ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿಯವರು ಮೊದಲು ಈ ಆರೋಪಕ್ಕೆ ಉತ್ತರ ಕೊಡಲಿ. ನಾವು ಸಹ ಹೋರಾಟ ಮಾಡುತ್ತೇವೆ. ನ್ಯಾಯಾಂಗ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


ಮುಡಾ ಹಗರಣ ನಡೆದಾಗ ಬಿಜೆಪಿಯವರೇ ಅಧ್ಯಕ್ಷರಾಗಿದ್ದರು. ಅವರ ಪಕ್ಷದ ಶಾಸಕರೇ ಇದ್ದರು. ಮುರುಗೇಶ ನಿರಾಣಿ, ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ನೀಡಿದ್ದರು. ಆ ಪ್ರಕರಣ ಏನಾಯ್ತು? ಕೋವಿಡ್ ವೇಳೆ ಎರಡು ಸಾವಿರ ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಎಂದು ಆರೋಪಿಸಿದರು.

Join Whatsapp
Exit mobile version