ಹತ್ಯೆಯಾದ ಹರ್ಷ ಕುಟುಂಬಕ್ಕೆ 25 ಲಕ್ಷ ರೂ. ಚೆಕ್ ಹಸ್ತಾಂತರಿಸಿದ ಬಿ.ಎಸ್.ಯಡಿಯೂರಪ್ಪ

Prasthutha|

ಶಿವಮೊಗ್ಗ:  ಹತ್ಯೆಯಾದ ಹರ್ಷನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ನೀಡಿದ 25 ಲಕ್ಷ ರೂ. ಚೆಕ್ ಅನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಸ್ತಾಂತರಿಸಿದರು.

- Advertisement -

ಭಾನುವಾರ ಹರ್ಷನ ಮನೆಗೆ ಭೇಟಿ ನೀಡಿದ ಯಡಿಯೂರಪ್ಪನವರು  ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ಹರ್ಷ ಈ ಭಾಗದಲ್ಲಿ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದಿದ್ದು, ಹಿಂದೂ ನಾಯಕನಾಗಿ ಬೆಳೆಯುತ್ತಿದ್ದ. ಇದನ್ನು ಸಹಿಸದೆ ಅವನನ್ನು ಕೊಲೆ ಮಾಡಲಾಗಿದೆ ಎಂದು ದೂರಿದರು.

ಭಾರತದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಒಗ್ಗಟ್ಟಿನಿಂದ ಬಾಳಬೇಕು. ಪ್ರಧಾನಿ ನರೇಂದ್ರ ಮೋದಿಯವರ ಆಶಯವು ಕೂಡಾ ಅದೇ ಆಗಿದೆ ಎಂದರು.

- Advertisement -

ಈ ವೇಳೆ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮೇಯರ್ ಸುನೀತ ಅಣ್ಣಪ್ಪ, ಡಿಸಿ ಸೆಲ್ವಮಣಿ ಹಾಗು ಎಸ್ಪಿ ಲಕ್ಷ್ಮಿ ಪ್ರಸಾದ್ ಹಾಜರಿದ್ದರು.

Join Whatsapp
Exit mobile version