ರಾಮನಗರ: ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

Prasthutha|

ರಾಮನಗರ: ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ.

- Advertisement -


ಸಂತೋಷ್ ಎಂಬುವವರ ಮನೆಯಲ್ಲಿ ಗೃಹ ಪ್ರವೇಶವನ್ನು ಹಮ್ಮಿಕೊಂಡಿದ್ದರು. ಅದರಂತೆ ಮಧ್ಯಾಹ್ನ 1.30 ರ ಸಮಯದಲ್ಲಿ ಬಂದಂತಹ ಅತಿಥಿಗಳು ಊಟ ಮಾಡಿದ್ದರು. ಬಳಿಕ ಹಲವರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, ಕೂಡಲೇ 28 ಕ್ಕೂ ಹೆಚ್ಚು ಜನರನ್ನು ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.


ಈ ಕುರಿತು ಮಾತನಾಡಿದ ಜಿಲ್ಲಾಸ್ಪತ್ರೆ ವೈದ್ಯರು ಯಾವುದೇ ಪ್ರಾಣಾಪಾಯದ ತೊಂದರೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಬಿಸಿಲಿನ ಕಾರಣ ಫುಡ್ ಪಾಯಿಸನ್ ಆಗಿರುವ ಕುರಿತು ಅನುಮಾನ ಮೂಡಿದೆ. ಈಗಾಗಲೇ ಅಧಿಕಾರಿಗಳು ಊಟವನ್ನು ಸ್ಯಾಂಪಲ್ ತರಿಸಿಕೊಂಡಿದ್ದಾರೆ. ಕಳೆದ ಒಂದು ವಾರದಲ್ಲಿ ಇಂತಹದ್ದೇ ಮೂರನೇ ಘಟನೆ ಇದಾಗಿದೆ ಎಂದು ಹೇಳಿದ್ದಾರೆ.

Join Whatsapp