2,000 ರೂಪಾಯಿಗೆ ಕರೆಂಟ್ ಕದೀಬೇಕಾ ನಾನು: ಕುಮಾರಸ್ವಾಮಿ

Prasthutha|

- Advertisement -

ಬೆಂಗಳೂರು: ತಮ್ಮ ನಿವಾಸದ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಪಡೆದ ಆರೋಪ ಸಂಬಂಧ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್​ಡಿ ಕುಮಾರಸ್ವಾಮಿ, ಅಂತಹ ದೊಡ್ಡ ಅಪರಾಧ ನಡೆದಿಲ್ಲ, ನಾನೇನು ದೇಶ ಲೂಟಿ ಮಾಡಿಲ್ಲ. 2,000 ರೂಪಾಯಿಗೆ ಕರೆಂಟ್ ಕದೀಬೇಕಾ ನಾನು ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ ನವರಿಗೆ ಬೇರೆ ಯಾವುದೇ ಕೆಲಸ ಇಲ್ಲ. ಕಾಂಗ್ರೆಸ್​​ ಗೆ ದೊಡ್ಡ ದೊಡ್ಡ ಹಗರಣ ಬಯಲಿಗೆ ತರುವ ಧೈರ್ಯವಿಲ್ಲ. ಕಾಂಗ್ರೆಸ್​ ನವರು ರಾಜ್ಯವನ್ನು ಬೆಳಗಿಸಿರುವುದನ್ನು ನೋಡಿದ್ದೇನೆ. ದರಿದ್ರ ಬಂದಿರುವುದು ಕಾಂಗ್ರೆಸ್​ ನಾಯಕರಿಗೆ ಎಂದರು.

Join Whatsapp