TDP ಕಾರ್ಯಕ್ರಮದಲ್ಲಿ ಮತ್ತೆ ಕಾಲ್ತುಳಿತ| ಮೂವರು ಮಹಿಳೆಯರು ಮೃತ್ಯು

Prasthutha|

ಗುಂಟೂರು(ಆಂಧ್ರ ಪ್ರದೇಶ): ನಾಲ್ಕು ದಿನದ ಹಿಂದೆಯಷ್ಟೇ ಟಿಡಿಪಿ ರ್‍ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 8 ಜನರು ಮೃತಪಟ್ಟ ಘಟನೆ ನಡೆದ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದೆ.

- Advertisement -

 ಟಿಡಿಪಿ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಸಂಕ್ರಾಂತಿ ಹಬ್ಬದ ಅಂಗವಾಗಿ ಅಯೋಜಿಸಿದ್ದ ಸೀರೆ ವಿತರಣೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಮತ್ತೆ ಮೂವರು ಮೃತಪಟ್ಟಿದ್ದಾರೆ.

ಆಂಧ್ರದ ಗುಂಟೂರಿನ ವಿಕಾಸನಗರದಲ್ಲಿ ಭಾನುವಾರ ಈ ದುರಂತ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ಅಂಗವಾಗಿ ಸೀರೆ ಹಂಚುತ್ತಿದ್ದ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

ಘಟನೆ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version