ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತ್ಯು

Prasthutha|

- Advertisement -

ಚಿಕ್ಕಬಳ್ಳಾಪುರ: ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದಿದೆ.

ಇಮ್ರಾನ್ ಖಾನ್(20), ರಾಧಿಕಾ(19) ಹಾಗೂ ಪೂಜಾ ಮೃತಪಟ್ಟವರು ಎಂದು ಗುರುತಿಸಲಾಗಿದೆ.

- Advertisement -

ವೀಕೆಂಡ್ ಎಂದು ಕರ್ನಾಟಕ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ಇಮ್ರಾನ್ ಖಾನ್, ವಿಕಾಸ್, ಚನ್ನರಾಮ್ ಎಂಬ ಆರು ವಿದ್ಯಾರ್ಥಿಗಳು ಮೂರು ಬೈಕುಗಳಲ್ಲಿ ಶನಿವಾರ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯಕ್ಕೆ ಪಿಕ್‌ನಿಕ್ ಬಂದಿದ್ದರು. ಈ ವೇಳೆ ವಿದ್ಯಾರ್ಥಿಗಳು ಜಲಾಶಯ ಹಿಂಭಾಗದ ಹಿನ್ನೀರಿನಲ್ಲಿ ಈಜಾಡಲು ಹೋಗಿದ್ದು, ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Join Whatsapp