Home ಟಾಪ್ ಸುದ್ದಿಗಳು ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು 30 ಮಂದಿ ಮೃತ್ಯು: ಸಿಐಡಿ ತನಿಖೆಗೆ ಸ್ಟಾಲಿನ್ ಆದೇಶ

ತಮಿಳುನಾಡಿನಲ್ಲಿ ಕಳ್ಳಭಟ್ಟಿ ಕುಡಿದು 30 ಮಂದಿ ಮೃತ್ಯು: ಸಿಐಡಿ ತನಿಖೆಗೆ ಸ್ಟಾಲಿನ್ ಆದೇಶ

ಚೆನ್ನೈ: ಕಳ್ಳಭಟ್ಟಿ ಕುಡಿದ ಪರಿಣಾಮ 30 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಅಸ್ವಸ್ಥರ ಚಿಕಿತ್ಸೆ ನಡೆಯುತ್ತಿದೆ.ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಈ ಪ್ರಕರಣದಲ್ಲಿ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.


ಕಲ್ಲಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ಆಘಾತವಾಗಿದೆ ಮತ್ತು ದುಃಖವಾಗಿದೆ. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಇದನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ತಕ್ಷಣವೇ ಸಮಾಜವನ್ನು ಹಾಳುಗೆಡವುವ ಇಂತಹ ಕೃತ್ಯಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸ್ಟಾಲಿನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.


ಸಾವಿನ ವರದಿ ಹೊರಬಿದ್ದ ಕೂಡಲೇ ಡಿಎಂಕೆ ಸರ್ಕಾರ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಶ್ರವಣಕುಮಾರ್ ಜಾತಾವತ್ ಅವರನ್ನು ವರ್ಗಾವಣೆ ಮಾಡಿದೆ.

Join Whatsapp
Exit mobile version