ಕಾಂಗ್ರೆಸ್ ಮುಕ್ತ ಎನ್ನುತ್ತಿದ್ದ ಮೋದಿಗೆ 4 ರಾಜ್ಯಗಳ ಫಲಿತಾಂಶ ಉತ್ತರ: ವೀರಪ್ಪ ಮೊಯ್ಲಿ

Prasthutha|

ಕಲಬುರಗಿ: ಸದಾ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಪ್ರಧಾನಿ ಪಂಚರಾಜ್ಯಗಳಲ್ಲಿಯೂ ಕಾಂಗ್ರೆಸ್ ಮುಕ್ತ ಎನ್ನುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಮುಖಂಡರಿಗೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಮೂಲಕ ಮತದಾರನೇ ಉತ್ತರ ನೀಡಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

- Advertisement -

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮೊಯ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಉಳಿದ ರಾಜ್ಯಗಳಲ್ಲಿ ಅಧಿಕಾರ ಹಿಡಿಯದಿದ್ದರೂ ಹೆಚ್ಚಿನ ಸ್ಥಾನ ಪಡೆದಿದೆ. ಈ ಮೂಲಕ ಕಾಂಗ್ರೆಸ್ ‌ಮುಕ್ತ ಭಾರತ ಸಾಧ್ಯವಿಲ್ಲ ಎಂದು ಬಿಜೆಪಿಗರಿಗೆ ಮತ್ತೊಮ್ಮೆ ಜನರು ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದರು.

4 ರಾಜ್ಯಗಳ ಫಲಿತಾಂಶ 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ತಿಳಿಸಿದ ಮೊಯ್ಲಿ, ಲೋಕಸಭಾ ಚುನಾವಣೆಗೆ ‘ಇಂಡಿಯಾ’ ಒಕ್ಕೂಟ ಮತ್ತೊಮ್ಮೆ ಸಭೆ ಸೇರಿ ಹೊಸ ನಿಟ್ಟಿನಲ್ಲಿ ಹೆಜ್ಜೆ ಇಡಲಿದೆ ಎಂದರು.

- Advertisement -

ಗ್ಯಾರಂಟಿ ಯೋಜನೆಗಳು ಮತದಾರರ ಮೇಲೆ ಪರಿಣಾಮ ಬೀರಿವೆಯಾ ಇಲ್ಲವಾ ಎನ್ನುವ ಬದಲು ಅವುಗಳ ಅನುಷ್ಠಾನ ಬಹು ಮುಖ್ಯವಾಗಿದೆ ಎಂದು ಮೊಯ್ಲಿ ಹೇಳಿದರು.



Join Whatsapp