ಮಂಗಳೂರು: ಪಂಪ್ ವೆಲ್ ನಲ್ಲಿ ಯುವಕನಿಗೆ ಹಲ್ಲೆ ಪ್ರಕರಣ ; ಎಂಟು ಮಂದಿ ಪೊಲೀಸ್ ವಶಕ್ಕೆ

Prasthutha|

ಮಂಗಳೂರು : ಮಂಗಳೂರಿನ ಪಂಪ್ ವೆಲ್ ನಲ್ಲಿ ಯುವಕನ ಮೇಲೆ ತಂಡವೊಂದು ರಾತ್ರಿ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಈ ಪ್ರಕರಣದ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಎರಡು ಧರ್ಮಕ್ಕೆ ಸೇರಿದ ಸ್ನೇಹಿತರು ಬಸ್ಸಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಇದನ್ನರಿತ ತಂಡವೊಂದು ರಾತ್ರಿ ಸುಮಾರು 9:30ಕ್ಕೆ ಬಸ್ಸನ್ನು ಅಡ್ಡಹಾಕಿ ಬಸ್ ನಿಂದ ಇಬ್ಬರನ್ನು ಇಳಿಸಿ ಯುವಕನ ಮೇಲೆ ಹಲ್ಲೆ ನಡೆಸಿದೆ. ಆತನ ಮೇಲೆ ಚೂರಿ ಇರಿತ ಕೂಡಾ ಸಂಭವಿಸಿದೆ. ಆತನೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  ಘಟನೆಗೆ ಸಂಬಂಧಪಟ್ಟಂತೆ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.

- Advertisement -

307 ಸೆಕ್ಷನ್ ಸೇರಿದಂತೆ ವಿವಿಧ ಕಲಂಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಪ್ರತ್ಯೇಕ ನಾಲ್ಕು ತಂಡಗಳ ರಚನೆ ಮಾಡಲಾಗಿತ್ತು.

Join Whatsapp