25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ !

Prasthutha|

ತುಮಕೂರು: 25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ

- Advertisement -

45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ನಡೆದಿದೆ.

ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು.

- Advertisement -

ಇಂದು ಬೆಳಗ್ಗೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಕ್ಕಿಮರಿ ಪಾಳ್ಯದ ಶಂಕರಣ್ಣ ಮೃತದೇಹ ಪತ್ತೆಯಾಗಿದೆ. ಸದ್ಯಕ್ಕೆ ಹುಲಿಯೂರು ದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Join Whatsapp