ದೆಹಲಿಯಲ್ಲಿ ಗ್ಯಾಸ್ ಸೋರಿಕೆ: ಐದು ಮಂದಿ ಆಸ್ಪತ್ರೆಗೆ ದಾಖಲು

Prasthutha|

ಆಗ್ರಾ: ನೈಋತ್ಯ ದೆಹಲಿಯ ಆರ್.ಕೆ.ಪುರಂ ಎಂಬಲ್ಲಿನ ಏಕತಾ ವಿಹಾರದಲ್ಲಿ ಗ್ಯಾಸ್ ಸೋರಿಕೆ ಉಂಟಾದ ಪರಿಣಾಮ ಸ್ಥಳೀಯರಲ್ಲಿ ಕಣ್ಣಿನಲ್ಲಿ ತುರಿಕೆ ಕಾಣಿಸಿಕೊಂಡಿದ್ದು, ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

- Advertisement -

ಆರ್. ಕೆ. ಪುರಂ ಪ್ರದೇಶದ ಸ್ಲಮ್ ಕ್ಲಸ್ಟರ್ ನ ನಿವಾಸಿಗಳೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಗೆ ಸಂಬಂಧಿಸಿದಂತೆ ಅಗ್ನಿ ಶಾಮಕ ದಳ ತಕ್ಷಣ ಸ್ಥಳಕ್ಕೆ ಧಾವಿಸಿ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ.

- Advertisement -

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Join Whatsapp