ಬಿಹಾರ: ಕಳ್ಳತನದ ಆರೋಪದಲ್ಲಿ ಮುಸ್ಲಿಮ್ ವ್ಯಕ್ತಿಯ ಗುಂಪು ಹತ್ಯೆ

Prasthutha|

ಪಾಟ್ನಾ: ಕಳ್ಳತನದ ಆರೋಪ ಹೊರಿಸಿ ಮುಸ್ಲಿಮ್ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯ ಭವಾನಿಪುರ ಎಂಬಲ್ಲಿ ನಡೆದಿದೆ.

- Advertisement -

ಮುಹಮ್ಮದ್ ಸಿದ್ದಿಕಿ ಎಂಬಾತನನ್ನು ದನ ಕಳ್ಳತನದ ಆರೋಪ ಹೊರಿಸಿ ಗುಂಪೊಂದು ಮಾರಣಾಂತಿಕವಾಗಿ ಥಳಿಸಿ ಕೊಲೆ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಭವಾನಿಪುರದಿಂದ ಹಸು, ಹೋರಿ ಮತು ಎಮ್ಮೆಗಳನ್ನು ಕಳ್ಳತನ ಮಾಡಲಾಗುತ್ತಿದೆ ಎಂಬ ಆರೋಪದಲ್ಲಿ ಮುಂಜಾನೆ ದುಷ್ಕರ್ಮಿಗಳ ಗುಂಪೊಂದು ಸಿದ್ದಿಕ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಘಟನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಫೋರ್ಬಸ್ ಗಂಜ್ ಉಪ ವಿಭಾಗದ ಪೊಲೀಸ್ ಅಧಿಕಾರಿ ರಾಮ್ ಪುಕರ್ ಸಿಂಗ್, ಬೆಳಗ್ಗಿನ ಜಾವ ಸುಮಾರು ಎರಡು ಗಂಟೆಗೆ ಸ್ಥಳೀಯರು ಸಿದ್ದಿಕಿಯನ್ನು ಥಳಿಸಿ ಹತ್ಯೆ ನಡೆಸಿದ್ದರು ಎಂದು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅರಾರಿಯಾ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಭಾರತ – ನೇಪಾಳ ಗಡಿಗೆ ಹೊಂದಿಕೊಂಡಿರುವ ಅರಾರಿಯಾ ಎಂಬಲ್ಲಿ ನೇಪಾಳಕ್ಕೆ ಮಾರಾಟ ಮಾಡಲು ಜಾನುವಾರುಗಳನ್ನು ಕಳ್ಳತನ ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Join Whatsapp