Home ಟಾಪ್ ಸುದ್ದಿಗಳು ವಯನಾಡ್ ದುರಂತ: ಮೃತರ ಕುಟುಂಬಕ್ಕೆ 6 ಲಕ್ಷ ರೂ. ಪರಿಹಾರ ಘೋಷಿಸಿದ ಪಿಣರಾಯಿ ವಿಜಯನ್

ವಯನಾಡ್ ದುರಂತ: ಮೃತರ ಕುಟುಂಬಕ್ಕೆ 6 ಲಕ್ಷ ರೂ. ಪರಿಹಾರ ಘೋಷಿಸಿದ ಪಿಣರಾಯಿ ವಿಜಯನ್

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಯನಾಡ್ ಭೂಕುಸಿತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಆರು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.


ವಯನಾಡ್ ಭೂಕುಸಿತದಿಂದಾಗಿ ಕನಿಷ್ಠ 400ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. 4 ಲಕ್ಷ ರೂ.ಗಳಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮತ್ತು ಉಳಿದ 2 ಲಕ್ಷ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ನೀಡಲಾಗುತ್ತದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.


ಭೂಕುಸಿತದಲ್ಲಿ ಕಣ್ಣು ಮತ್ತು ಕೈಕಾಲುಗಳನ್ನು ಕಳೆದುಕೊಂಡ ಅಥವಾ ಶೇ.60 ರಷ್ಟು ಅಂಗವೈಕಲ್ಯಕ್ಕೆ ಒಳಗಾದವರಿಗೆ ಸಿಎಂಡಿಆರ್ ಎಫ್ ನಿಂದ 75,000 ರೂಪಾಯಿಗಳನ್ನು ಮಂಜೂರು ಮಾಡಲಾಗುವುದು ಎಂದು ಕೂಡಾ ಘೋಷಿಸಿದ್ದಾರೆ.

Join Whatsapp
Exit mobile version