Home ಟಾಪ್ ಸುದ್ದಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಪೋಟದ ಅಬ್ಬರಕ್ಕೆ 6 ಮಂದಿ ಬಲಿ, ಹಲವರು ನಾಪತ್ತೆ !

ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಪೋಟದ ಅಬ್ಬರಕ್ಕೆ 6 ಮಂದಿ ಬಲಿ, ಹಲವರು ನಾಪತ್ತೆ !

ಜಮ್ಮು , ಜುಲೈ 28: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಂಟಾದ ಭೀಕರ ಮಳೆ ಮೋಡ ಬಿರುಗಾಳಿಗೆ ಕನಿಷ್ಟ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಮಂದಿ ಗಾಯಗೊಂಡಿದ್ದಾರೆ. ಮಾತ್ರವಲ್ಲದೇ 40 ಮಂದಿ ನಾಪತ್ತೆಯಾಗಿದ್ದಾರೆಂದು ವರದಿಯಾಗಿದೆ.

ಕಿಶ್ತ್ವಾರ್ ಜಿಲ್ಲೆಯ ಡಚನ್ ಎಂಬಲ್ಲಿನ ಹೊನ್ಜಾನ್ ಗ್ರಾಮಕ್ಕೆ ಅಪ್ಪಳಿಸಿದ ಸಿಡಿಲು- ಮಿಂಚು ಮಿಶ್ರಿತ ಮಳೆಯ ಕಾರಣದಿಂದ ಭೀಕರ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಆರು ಶವಗಳನ್ನು ಮೇಲೆತ್ತಲಾಗಿದೆ. ಗಾಯಗೊಂಡ ಐದು ಮಂದಿಯನ್ನು ರಕ್ಷಿಸಲಾಗಿದೆಯೆಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಫ್ಕತ್ ಹುಸೇನ್ ರವರು ಸುದ್ದಿಗಾರರಿಗೆ ತಿಳಿಸಿದ್ದಾರೆ.


ಈ ಭೀಕರ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕನಿಷ್ಟ 40 ಮಂದಿ ಈ ಘಟನೆಯ ನಂತರ ಕಾಣೆಯಾಗಿದ್ದಾರೆ. ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಗಾಗಿ ಸಾಕಷ್ಟು ಶ್ರಮ ವಹಿಸುತ್ತಿದೆ. ಸ್ಥಳೀಯ ಪೊಲೀಸರು, ಸೇನೆ ಮತ್ತು ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆಯೆಂದು ಹೇಳಲಾಗುತ್ತಿದೆ

Join Whatsapp
Exit mobile version