ಆಂಧ್ರಪ್ರದೇಶ: TDP ರ‍್ಯಾಲಿ ವೇಳೆ ಕಾಲ್ತುಳಿತ| 8 ಮಂದಿ ಮೃತ್ಯು

Prasthutha|

ನೆಲ್ಲೂರು: TDP ರ‍್ಯಾಲಿ ವೇಳೆ ನೂಕುನುಗ್ಗಲು ಸಂಭವಿಸಿ ಓರ್ವ ಮಹಿಳೆ ಸೇರಿದಂತೆ ಎಂಟು ಮಂದಿ ಸಾವನ್ನಪಿದ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಕ್ಷೇತ್ರದ ವ್ಯಾಪ್ತಿಯ ಕಂದುಕೂರಿನಲ್ಲಿ ನಡೆದಿದೆ.

- Advertisement -

ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ರೋಡ್ ಶೋ ವೀಕ್ಷಿಸಲು ಸಾವಿರಾರು ಮಂದಿ ಆಗಮಿಸಿದ್ದು, ಈ ವೇಳೆ ನೂಕು ನುಗ್ಗಲು ಸಂಭವಿಸಿದೆ.

4 ಮಂದಿ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

- Advertisement -

 ನಾಯ್ಡು ಅವರು, ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಘಟನೆ ನಡೆದ ತಕ್ಷಣವೇ ರ‍್ಯಾಲಿಯನ್ನು ರದ್ದುಗೊಳಿಸಿದ್ದಾರೆ.

Join Whatsapp