Home ಟಾಪ್ ಸುದ್ದಿಗಳು 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ.ದೊಡ್ಡರಂಗೇಗೌಡ

86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ.ದೊಡ್ಡರಂಗೇಗೌಡ

ಬೆಂಗಳೂರು:  86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಿಗಾರ್ ತಿಳಿಸಿದ್ದಾರೆ.

ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ನುಡಿಜಾತ್ರೆಗಾಗಿ ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆದಿವೆ. ಇನ್ನು ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿಯಲ್ಲಿ ಇಂದು ಕಾರ್ಯಕಾರಿ ಸಮಿತಿಯ ಸಭೆ ನಡೆದಿದೆ. 

ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಡಾ.ದೊಡ್ಡರಂಗೇಗೌಡ, ಗೊ.ರು.ಚನ್ನಬಸಪ್ಪ, ಕೆ.ಎಸ್​. ಭಗವಾನ್ ಮತ್ತು ವೀಣಾ ಶಾಂತೇಶ್ವರ ಅವರ ಹೆಸರು ಪರಿಷತ್ತಿನ ಮುಂದೆ ಚರ್ಚೆಯಾಗಿತ್ತು. ಅಂತಿಮವಾಗಿ ಸಮ್ಮೇಳನಾಧ್ಯಕ್ಷರಾಗಿ ಡಾ. ದೊಡ್ಡರಂಗೇಗೌಡ ಅವರು ಬಹುಮತದಿಂದ ಆಯ್ಕೆಯಾಗಿದ್ದಾರೆ.

Join Whatsapp
Exit mobile version