ಸಹೋದರಿಯ ಬೆತ್ತಲೆ ಫೋಟೋ ಹೊಂದಿದ್ದ ಆರೋಪ: ಯುವಕನ ಬರ್ಬರ ಹತ್ಯೆ

Prasthutha|

- Advertisement -

ಬೆಂಗಳೂರು: ಸಹೋದರಿಯ ಬೆತ್ತಲೆ ಫೋಟೋ ಹೊಂದಿದ್ದ ಆರೋಪದ ಸಂಬಂಧ ನಡೆದ ಜಗಳದಲ್ಲಿ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ನಂದಾ ಕೊಲೆಯಾದವರು ಎಂದು ಗುರುತಿಸಲಾಗಿದೆ.

- Advertisement -

ತನ್ನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದಕ್ಕೆ ಆಕ್ರೋಶಗೊಂಡಿದ್ದ ದರ್ಶನ್, ತನ್ನ ಸಹಚರ ಆಶ್ರಯ್ ಜೊತೆ ಸೇರಿಕೊಂಡು ನಂದಾನನ್ನ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ಕೊಲೆಯಾದ ನಂದಾ ಚಿಕ್ಕಬಳ್ಳಾಫುರ ತಾಲೂಕಿನ ಹಾರೋಬಂಡೆ ಗ್ರಾಮದ ದರ್ಶನ್ ಎಂಬ ಯುವಕನ ಸಹೋದರಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋವನ್ನು ಹೊಂದಿದ್ದನು.
ಈ ಸಂಬಂಧ ಇಬ್ಬರ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಇದೀಗ ಹಾರೋಬಂಡೆ ಗ್ರಾಮದ ಬಳಿ ನಂದಾ ಹೆಣವಾಗಿ ಬಿದ್ದಿದ್ದು, ವಿಡಿಯೋ, ಫೋಟೋ ವಿಚಾರಕ್ಕೆ ದ್ವೇಷದಿಂದ ದರ್ಶನ್ ಮತ್ತು ಆಶ್ರಯ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೊಲೆ ವಿಚಾರ ತಿಳಿದ ಚಿಕ್ಕಬಳ್ಳಾಫುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.



Join Whatsapp