ಬೆತ್ತಲೆ ಪೂಜೆ ಮಾಡಿದರೆ ಅಪ್ಪನ ಸಾಲ ತೀರುತ್ತದೆ ಎಂದು ನಂಬಿಸಿ ಬಾಲಕನ ಬೆತ್ತಲೆ ವೀಡಿಯೋ ಮಾಡಿದ ದುಷ್ಕರ್ಮಿಗಳು

Prasthutha|

ಕೊಪ್ಪಳ: ಬೆತ್ತಲೆ ಪೂಜೆ ಮಾಡಿದರೆ ಅಪ್ಪನ ಸಾಲ ತೀರುತ್ತದೆ ಎಂದು ನಂಬಿಸಿ ಅಪ್ರಾಪ್ತ ಬಾಲಕನ ಬೆತ್ತಲೆ ವೀಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ತಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಬಡತನದ ಬೇಗೆಯಿಂದ ಬಳಲುತ್ತಿದ್ದ ಬಾಲಕನನ್ನು ಪುಸಲಾಯಿಸಿ ಪರಿಚಯಸ್ಥರೇ ದ್ರೋಹ ಮಾಡಿದ್ದಾರೆ. ಸಮಸ್ಯೆಗೆ ಪರಿಹಾರ ನೀಡುತ್ತೇವೆಂದು ಅಪ್ರಾಪ್ತ ಬಾಲಕನನ್ನು ನಂಬಿಸಿ ಬೆತ್ತಲೆ ಪೂಜೆ ಮಾಡಿಸುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಿ ವಿಕೃತಿ ಮರೆದಿದ್ದಾರೆ.

ಸಂತ್ರಸ್ತ 16 ವರ್ಷದ ಬಾಲಕ ಕೊಪ್ಪಳ ತಾಲೂಕಿನ ಹಾಸಗಲ್ ಗ್ರಾಮದ ನಿವಾಸಿ. ಶರಣಪ್ಪ, ಇರುಪನಗೌಡ, ಶರಣಪ್ಪ ತಳವರ್ ವಿಕೃತ ಮೆರೆದವರಾಗಿದ್ದಾರೆ. ನಿಮ್ಮ ಅಪ್ಪನ ಸಾಲ ತೀರಬೇಕೆಂದರೆ ಬೆತ್ತಲೆ ಪೂಜೆ ಮಾಡಿದರೆ ದುಡ್ಡು ಬರುತ್ತದೆ. ಮತ್ತೆ ಸಾಲ ಕೂಡ ತೀರುತ್ತದೆ. ಬೆತ್ತಲೆ ಪೂಜೆ ಮಾಡಬೇಕು. ಇದರಿಂದ ಬಡತನ ನಿವಾರಣೆ ಆಗುತ್ತದೆ ಎಂದು ಬಾಲಕನನ್ನು ಆರೋಪಿಗಳಾದ ಶರಣಪ್ಪ ಮತ್ತವರ ತಂಡ ಪುಸಲಾಯಿಸಿದೆ.

- Advertisement -

ಬಳಿಕ ಕೊಠಡಿಯಲ್ಲಿ ಪ್ರದೀಪ್ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ, ಪೂಜೆ ಮಾಡುವ ನಾಟಕವಾಡಿ. ಇದನ್ನು ವೀಡಿಯೋ ಮಾಡಿ ಫೇಸ್ ಬುಕ್, ವಾಟ್ಸಾಪ್ ಹಾಗೂ ಯೂಟ್ಯೂಬ್ ಗಳಲ್ಲಿ ವೀಡಿಯೋ ವೈರಲ್ ಮಾಡಿದ್ದಾರೆ. ಇದರಿಂದಾಗಿ ನೊಂದ ಸಂತ್ರಸ್ತ ಮತ್ತು ಕುಟುಂಬಸ್ಥರು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.



Join Whatsapp