ಹತಾಶೆ, ಸೋಲು, ನೋವುಗಳನ್ನು ಜಾಹೀರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ: ಕಾಂಗ್ರೆಸ್

Prasthutha|

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಸುದ್ದಿ ರೂಪದಲ್ಲಿ ಜಾಹೀರಾತು ನೀಡಿರುವ ಬಿಜೆಪಿಯ ಕ್ರಮವನ್ನು ಕಾಂಗ್ರೆಸ್ ಖಂಡಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, ತನ್ನ ಹತಾಶೆ, ಸೋಲು, ನೋವುಗಳನ್ನು ಜಾಹೀರಾತು ನೀಡಿ ವ್ಯಕ್ತಪಡಿಸುವ ಏಕೈಕ ರಾಜಕೀಯ ಪಕ್ಷ ಬಿಜೆಪಿ ಎಂದು ಟೀಕಿಸಿದೆ.

- Advertisement -

ಒಂದೇ ವಾರದಲ್ಲಿ ಎರಡೆರೆಡು ಬಾರಿ ಪತ್ರಿಕೆಗಳಲ್ಲಿ ಮುಖಪುಟದ ಜಾಹೀರಾತು ನೀಡುತ್ತಿರುವ ಬಿಜೆಪಿಯ ಹತಾಶೆ ಹಿಮಾಲಯದೆತ್ತರಕ್ಕೆ ಏರಿದೆ. ಅದು ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ಬಾಕಿ ಕಾಂಗ್ರೆಸ್ ಎಂದು ವ್ಯಂಗ್ಯವಾಡಿದೆ.



Join Whatsapp