ಮೈಸೂರಿನಲ್ಲಿ ಸುಸೂತ್ರವಾಗಿ ನಡೆದ ಗಣೇಶೋತ್ಸವ, ಈದ್ ಮಿಲಾದ್, ದಸರಾ: ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಅಬ್ದುಲ್ ಮಜೀದ್

Prasthutha|

ಬೆಂಗಳೂರು: ಕಳೆದ ಎರಡೂವರೆ ತಿಂಗಳಿನಲ್ಲಿ ಸಾಲಾಗಿ ಬಂದ ಹಬ್ಬಗಳಾದ ಗಣೇಶೋತ್ಸವ, ಈದ್ ಮಿಲಾದ್ ಮತ್ತು ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂದರ್ಭದಲ್ಲಿ ಮೈಸೂರು ಜಿಲ್ಲೆಯಲ್ಲಿ ಯಾವುದೇ ಗೊಂದಲ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಶ್ರಮವಹಿಸಿ ಅಚ್ಚುಕಟ್ಟಾಗಿ ಭದ್ರತೆ ವ್ಯವಸ್ಥೆ ಮಾಡಿದ ಮೈಸೂರು ಜಿಲ್ಲೆಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -


ಶುಕ್ರವಾರ ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ ಅಬ್ದುಲ್ ಮಜೀದ್ , ಪೊಲೀಸರ ಕರ್ತವ್ಯ ನಿಷ್ಠೆಯನ್ನು ಪ್ರಶಂಸಿಸಿದರು.
ಮುಂದಿನ ದಿನಗಳಲ್ಲಿಯೂ ಪೊಲೀಸರು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶ್ರಮವಹಿಸಬೇಕು. ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.



Join Whatsapp