ಸುರತ್ಕಲ್ ಟೋಲ್ ಗೇಟ್ ವಿರುದ್ಧ ತೀವ್ರಗೊಂಡ ಪ್ರತಿಭಟನೆ: ಸಾವಿರಾರು ಜನ ಜಮಾವಣೆ

Prasthutha|

►ಬ್ಯಾರಿಕೇಡ್ ಮುರಿದು ನುಗ್ಗಿದ ಹೋರಾಟಗಾರರು

- Advertisement -

ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ಎನ್ ಐಟಿಕೆ ಬಳಿ ಸಾವಿರಾರು ಜನ ಜಮಾವಣೆಗೊಂಡಿದ್ದು, ಪ್ರತಿಭಟನೆ ಆರಂಭವಾಗಿದೆ.


ಸುರತ್ಕಲ್ ಟೋಲ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮಿಥುನ್ ರೈ, ಶಶಿಧರ್ ಹೆಗ್ಡೆ, ಬಿ.ಕೆ.ಇಮ್ತಿಯಾಝ್ ಮೊದಲಾದವರು ಹೋರಾಟಕ್ಕೆ ನೇತೃತ್ವ ನೀಡಿದ್ದಾರೆ.

- Advertisement -


ಮುನ್ನೆಚ್ಚರಿಕಾ ಕ್ರಮವಾಗಿ ಟೋಲ್ ಗೇಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಟೋಲ್ ಗೇಟ್ ಬಳಿ 10 ಕೆಎಸ್ಆರ್ ಪಿ ತುಕಡಿಗಳು, ಐದು ಸಿಆರ್ ಪಿಎಫ್ ತುಕಡಿಗಳು ಸೇರಿದಂತೆ 450 ಪೊಲೀಸ್ ಕಾನ್ಸ್ ಸ್ಟೆಬಲ್ ಹಾಗೂ 40 ಮಂದಿ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.



Join Whatsapp