ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅರ್ಜಿ ವಜಾ

Prasthutha|

ನವದೆಹಲಿ:  ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಪಶ್ಚಿಮ ಬಂಗಾಳ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.

- Advertisement -

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ವಿಕ್ರಮ್ ನಾಥ್ ಅವರ ಪೀಠವು ಮಾಣಿಕ್ ಭಟ್ಟಾಚಾರ್ಯ ಅವರ ಅರ್ಜಿಯ ಮೇಲಿನ ಆದೇಶವನ್ನು ಮಂಗಳವಾರ ಕಾಯ್ದಿರಿಸಿತ್ತು.

ಅಕ್ಟೋಬರ್ 11 ರಂದು ಅರ್ಜಿದಾರರನ್ನು 14 ದಿನಗಳ ಕಸ್ಟಡಿಗೆ ನೀಡುವಂತೆ ಕೋರಿ ಇಡಿ  ತನಿಖಾಧಿಕಾರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಮಾಣಿಕ್ ಭಟ್ಟಾಚಾರ್ಯ ಕಲ್ಕತ್ತಾದ ಸಿಟಿ ಸೆಷನ್ಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ (ಸಿಬಿಐ-1) ನ್ಯಾಯಾಲಯಕ್ಕೆ ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದಾರೆ.



Join Whatsapp