ರಸಗುಲ್ಲಾಕ್ಕಾಗಿ ಮಾರಾಮಾರಿ: ಓರ್ವ ಸಾವು, ಕೆಲವರಿಗೆ ಗಾಯ

Prasthutha|

ಆಗ್ರಾ: ರಸಗುಲ್ಲಾಕ್ಕಾಗಿ ನಡೆದ ಘರ್ಷಣೆಯಲ್ಲಿ 22 ವರ್ಷದ ಯುವಕನೋರ್ವ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ಏತ್ಮಾದಪುರದಲ್ಲಿ ನಡೆದಿದೆ.

- Advertisement -

ಮೃತನನ್ನು ಖಂಡೌಲಿಗೆ ಸೇರಿದ ಸನ್ನಿ ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ ನಡೆದ ಮೊಹಲ್ಲಾ ಶೈಖಾನ್ ನಿವಾಸಿ ಉಸ್ಮಾನ್ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ರಸಗುಲ್ಲ ಕೊರತೆಯಾದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ರಸಗುಲ್ಲ ಕೊರತೆ ಕುರಿತಂತೆ ವಧು ಹಾಗೂ ವರನ ಕಡೆಯವರ ನಡುವೆ ವಾಗ್ವಾದ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಗಾಯಗೊಂಡಿದ್ದ ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಥಮ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಯಿತು.

ಈ ಬಗ್ಗೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.



Join Whatsapp