ಮಂಗಳೂರು: SDPI ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿ ಹಾಕಿದ್ದ ಬ್ಯಾನರ್ ಹರಿದ ದುಷ್ಕರ್ಮಿಗಳು

Prasthutha|

ಬಂಟ್ವಾಳ : ಬಿ ಸಿ ರೋಡಿನ ನಾರಾಯಣ ಗುರು ವೃತ್ತದ ಬಳಿ ಎಸ್ ಡಿ ಪಿ ಐ ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ.

- Advertisement -

ಈ ಫ್ಲೆಕ್ಸ್ ನಲ್ಲಿ, ಎಸ್ ಡಿ ಪಿ ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯಗಳು ಎಂದು ಉಲ್ಲೇಖವಾಗಿತ್ತು.

ಕನ್ನಡ ರಾಜ್ಯೋತ್ಸವದ ಫ್ಲೆಕ್ಸ್ ಹಾಕುವುದು ಕೂಡ ಇಲ್ಲಿನ ಕೆಲವರಿಗೆ ಸಹಿಸಲಾಗುತ್ತಿಲ್ಲ. ಇಂತಹ ಕನ್ನಡ ವಿರೋಧಿಗಳನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸಬೇಕೆಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಆಗ್ರಹಿಸಿದೆ.



Join Whatsapp