ಆ್ಯಸಿಡ್ ದಾಳಿಗೊಳಗಾದ ಯುವತಿಗೆ ಸರ್ಕಾರಿ ಕೆಲಸ; ಸಿಎಂ ಬೊಮ್ಮಯಿ ಭರವಸೆ

Prasthutha|

ಬೆಂಗಳೂರು: ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೊಳಗಾದ ಯುವತಿಗೆ ಸರ್ಕಾರಿ ಕೆಲಸ  ಹಾಗೂ  ಫ್ಲ್ಯಾ ಟ್ ನೀಡಲು ಸಿಎಂ ಬೊಮ್ಮಯಿ ಭರವಸೆ ನೀಡಿದ್ದಾರೆ.

- Advertisement -

ಮಂಗಳವಾರ ಆ್ಯಸಿಡ್ ದಾಳಿಗೊಳಗಾದ ಯುವತಿ  ಆರ್ ಟಿ ನಗರ ಸಿಎಂ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಯಿ ಅವರನ್ನು ಭೇಟಿ, ಸರಕಾರದ ಭರವಸೆಯಂತೆ ಸರ್ಕಾರಿ ಕೆಲಸದ ಜೊತೆಗೆ  ಒಂದು ನಿವಾಸ ನೀಡುವಂತೆಯೂ ಮನವಿ ಮಾಡಿದ್ದರು. 

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ. ಆಕೆ ಒಂದು ಮನೆ ನಿರ್ಮಿಸಿ ಕೊಡುವಂತೆಯೂ  ಬೇಡಿಕೆ ಸಲ್ಲಿಸಿದ್ದು, ವಸತಿ ಸಚಿವರ ಬಳಿ ಮಾತನಾಡಿ, ಈ ಭಾಗದಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿರುವ 40 ಸಾವಿರ ಫ್ಲ್ಯಾಟ್ ಗಳಲ್ಲಿ ಒಂದು ಫ್ಲ್ಯಾಟ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಅಲ್ಲದೆ, ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನವನ್ನು 10 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದರು.



Join Whatsapp