ಜೈಲಿಗೆ ಆಹಾರ ತರಿಸಿಕೊಂಡರೆ ಜೈಲು ಅಧಿಕಾರಿಗೂ, ತರಿಸಿಕೊಂಡವರಿಗೂ ಹೆಚ್ಚುವರಿ ಶಿಕ್ಷೆ: ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಕೈದಿಗಳಿಗೆ ಹೊರಗಡೆಯಿಂದ ಏನನ್ನಾದರೂ ತಂದು ಕೊಟ್ಟರೆ ಜೈಲು ಅಧಿಕಾರಿಗಳಿಗೆ 5 ವರ್ಷ ಜೈಲು ಶಿಕ್ಷೆ, ತರಿಸಿಕೊಂಡವರಿಗೆ ಅವರ ಸೆರೆವಾಸ ಮುಗಿದ ಬಳಿಕ ಪುನಃ 5 ವರ್ಷ ಶಿಕ್ಷೆ ಮುಂದುವರಿಸುವ ಕಾನೂನು ಜಾರಿಗೆ ತಂದಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

- Advertisement -

ಜೈಲಿನಲ್ಲಿ ಬಿರಿಯಾನಿ ತರಿಸಿ ತಿನ್ನುತ್ತಿದ್ದಾರೆ. ಮದ್ಯ ಸೇವಿಸುತ್ತಿದ್ದಾರೆ. ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಮಾಧಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಇದು ಸೆರೆಮನೆಯೋ, ಅರಮನೆಯೋ ಎಂಬ ಎಂಬ ಸಾರ್ವಜನಿಕ ವಲಯದ ಆರೋಪಗಳಿಗೆ  ಗೃಹ ಸಚಿವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.

ಜೈಲಿನಲ್ಲಿರುವ ಕೈದಿಗಳಿಗೆ ಯಾರೂ ಕೂಡ ಹೊರಗಡೆಯಿಂದ ಏನನ್ನಾದರೂ ತಂದು ಕೊಡಬಾರದು, ಮಾದಕ ವಸ್ತು ಸೇವಿಸಲು ಸಹಾಯ ಮಾಡಬಾರದು ಎಂದು ಆದೇಶಿಸಿದ್ದಾರೆ.



Join Whatsapp