ಜ್ಞಾನವಾಪಿ ಮಸೀದಿ ಪ್ರಕರಣ: ಮಧ್ಯಂತರ ಆದೇಶವನ್ನು ವಿಸ್ತರಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಜ್ಞಾನವಾಪಿ ಮಸೀದಿಯನ್ನು ವಿವಾದವನ್ನಾಗಿ ಮಾಡಿದ ಪ್ರಕರಣದಲ್ಲಿ ಮೇ 17 ರಂದು ಹೊರಡಿಸಲಾದ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಸ್ತರಿಸಿದೆ. ವಿಚಾರಣೆಯನ್ನು ನವೆಂಬರ್ 28 ಕ್ಕೆ ಮುಂದೂಡಿದೆ.

- Advertisement -

 ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರನ್ನು ಒಳಗೊಂಡ ಪೀಠವು ಮಧ್ಯಂತರ ಆದೇಶವನ್ನು ಮುಂದಿನ ಆದೇಶದವರೆಗೆ ವಿಸ್ತರಿಸಿದೆ.

ಈ ಮೂಲಕ ವಾರಣಾಸಿ ಸಿವಿಲ್ ನ್ಯಾಯಾಲಯದ ಆದೇಶದ ಸಮಯದಲ್ಲಿ ಮಸೀದಿಯೊಳಗೆ ಶಿವಲಿಂಗ ಕಂಡುಬಂದಿದೆ ಎಂದು ವರದಿಯಾದ ಪ್ರದೇಶವನ್ನು ರಕ್ಷಿಸಲು ನಿರ್ದೇಶನಗಳನ್ನು ನೀಡಲಾಗಿದೆ.

- Advertisement -

ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗ ಎನ್ನಲಾದ ವಸ್ತುವನ್ನು ರಕ್ಷಿಸಬೇಕು ಎಂದು ಕೋರಿದ್ದ ಆದೇಶವನ್ನು ವಿಸ್ತರಿಸಬೇಕೆಂದು ಕೋರಿ ಮನವಿ ಸಲ್ಲಿಸಲಾಗಿತ್ತು.



Join Whatsapp