‘ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್’: ಇಬ್ರಾಹಿಂ ವಿರುದ್ಧ ಚೇತನ್ ಟೀಕಾಪ್ರಹಾರ

Prasthutha|

ಬೆಂಗಳೂರು: ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್ ಎಂದು ನಟ ಚೇತನ್ ಕುಮಾರ್ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿಕೆ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿದ ಚೇತನ್, ಸಿ.ಎಂ. ಇಬ್ರಾಹಿಂ ಟಿಪ್ಪು ಸುಲ್ತಾನ್ ಪ್ರತಿಮೆ ಬೇಡ, ಪ್ರತಿಮೆ ಸ್ಥಾಪಿಸುವುದನ್ನು ಇಸ್ಲಾಂ ಒಪ್ಪುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದು ಅವರ ಅವಿವೇಕ ಮತ್ತು ಮೂರ್ಖತನದ ಹೇಳಿಕೆಯಾಗಿದೆ. ಮುಸಲ್ಮಾನರಾಗಿ ಹುಟ್ಟಿದ ಟಿಪ್ಪುವಿನ ಮೇಲೆ ಹಿಂದುತ್ವದ ದ್ವೇಷವನ್ನು ನಾವು ಖಂಡಿಸಲೇಬೇಕು ಮತ್ತು ಟಿಪ್ಪುವಿನ ಮೇಲೆ ಇಸ್ಲಾಮಿಸ್ಟ್ ಲಾಬಿಗಳ ಇಸ್ಲಾಮಿನ ಹೇರಿಕೆಯನ್ನು ಕೂಡ ನಾವು ವಿರೋಧಿಸಬೇಕು. ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್ ಎಂದು ಬರೆದುಕೊಂಡಿದ್ದಾರೆ.



Join Whatsapp