ಮಾಲೆಗಾಂವ್ ಸ್ಫೋಟ ಆರೋಪಿ, ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅನಾರೋಗ್ಯದ ನೆಪವೊಡ್ಡಿ ವಿಚಾರಣೆಗೆ ಗೈರು

Prasthutha|

ನವದೆಹಲಿ : ಮಾಲೆಗಾಂವ್ ಬಾಂಬ್ ಸ್ಫೋಟ ಆರೋಪಿ, ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅನಾರೋಗ್ಯ ಕಾರಣಗಳಿಂದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿರುವುದಾಗಿ ವರದಿಯೊಂದು ತಿಳಿಸಿದೆ.

- Advertisement -

2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ವಿಚಾರಣೆಯ ವೇಳೆ ಪ್ರಗ್ಯಾ ಸಿಂಗ್ ಠಾಕೂರ್ ಮತ್ತು ಇತರ ಆರೋಪಿಗಳು ಖುದ್ದಾಗಿ ಹಾಜರಿರುವಂತೆ ನ್ಯಾಯಾಲಯ ಆದೇಶಿಸಿತ್ತು. ಎನ್ ಐಎ ವಿಶೇಷ ನ್ಯಾಯಾಲಯದಲ್ಲಿ ಈ ಪ್ರಕರಣವನ್ನು ಹೊಸದಾಗಿ ನೇಮಕಗೊಂಡಿರುವ ನ್ಯಾಯಾಧೀಶ ಪಿ.ಆರ್. ಸಿಂಟ್ರೆ ವಿಚಾರಣೆ ನಡೆಸಲಿದ್ದಾರೆ.

ಮೂವರು ಆರೋಪಿಗಳು ಮಾತ್ರವೇ ಹಾಜರಾಗಿದ್ದು, ಆರೋಪಿಗಳಾದ ಪ್ರಗ್ಯಾ ಸಿಂಗ್, ರಮೇಶ್ ಉಪಾಧ್ಯಾಯ, ಸುಧಾಕರ್ ದ್ವಿವೇದಿ ಮತ್ತು ಸುಧಾಕರ್ ಚತುರ್ವೇದಿ ನ್ಯಾಯಾಲಯದಲ್ಲಿ ಹಾಜರಿರಲಿಲ್ಲ.

- Advertisement -

ಭಯೋತ್ಪಾದಕ ಕೃತ್ಯದ ಆರೋಪದಲ್ಲಿ ಜೈಲಿನಲ್ಲಿದ್ದು, ವಿಚಾರಣೆ ಎದುರಿಸಿದ್ದರೂ ಪ್ರಗ್ಯಾ ಸಿಂಗ್ ಠಾಕೂರು ಅವರನ್ನು ಬಿಜೆಪಿ ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಿತ್ತು. ಅಲ್ಲಿ ಅವರು ಗೆದ್ದು ಈಗ ಬಿಜೆಪಿ ಸಂಸದೆಯೂ ಆಗಿದ್ದಾರೆ.

Join Whatsapp