ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ: ಸಂಜಯ್ ರಾವುತ್

Prasthutha|

ಮುಂಬೈ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿ ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.

- Advertisement -


ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ ಕೆಲ ಗಂಟೆಗಳ ಬಳಿಕ ರಾವುತ್ ಈ ಹೇಳಿಕೆ ನೀಡಿದ್ದಾರೆ.


ಶರದ್ ಪವಾರ್ ನೇತೃತ್ವದಲ್ಲಿ ನಮ್ಮ ಜನ ಬೆಳಗಾವಿಗೆ ಹೋಗಲು ಸಿದ್ಧರಿದ್ದಾರೆ. ‘ಮಹಾರಾಷ್ಟ್ರ ಎಲ್ಲವನ್ನೂ ತಾಳ್ಮೆಯಿಂದ ವೀಕ್ಷಿಸುತ್ತಿದೆ. ಆದರೆ, ಅದಕ್ಕೂ ಒಂದು ಮಿತಿ ಇದೆ. 24 ಗಂಟೆಗಳ ಅವಧಿಯಲ್ಲಿ ವಾಹನಗಳ ಮೇಲಿನ ದಾಳಿ ನಿಲ್ಲದಿದ್ದರೆ ನಮ್ಮ ತಾಳ್ಮೆ ಬೇರೆ ಸ್ವರೂಪ ಪಡೆದುಕೊಳ್ಳಲಿದೆ ಎಂದು ರಾವುತ್ ಹೇಳಿದ್ದಾರೆ. ಅಗತ್ಯ ಬಿದ್ದರೆ ಬೆಳಗಾವಿಗೆ ಹೋಗುವುದಾಗಿಯೂ ಪವಾರ್ ಹೇಳಿದ್ದಾರೆಂದು ರಾವುತ್ ತಿಳಿಸಿದರು.



Join Whatsapp